May 19, 2024

Bhavana Tv

Its Your Channel

ನೂತನವಾಗಿ ನಿರ್ಮಾಣವಾದ ಅರಣ್ಯ ಇಲಾಖೆಯ ವಸತಿ ಸಂಕೀರ್ಣ ಉದ್ಘಾಟಿಸಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ನಗರದ ಬೆಲ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾದ ಅರಣ್ಯ ಇಲಾಖೆಯ ವಸತಿ ಸಂಕೀರ್ಣವನ್ನು ಉದ್ಘಾಟಿಸಿದರು.


ಈ ವೇಳೆ ಮಾತನಾಡಿದ ಸಚಿವರು ಕೆಲಸ ಮಾಡುವ ಸಿಬ್ಬಂದಿಗಳು ಮಾನಸಿಕವಾಗಿ ನೆಮ್ಮದಿಯಿಂದ ಇದ್ದಾಗ ಮಾತ್ರ ಶಾಂತಿಯುತವಾಗಿ ಕೆಲಸ ಮಾಡುವುದಕ್ಕೆ ಸಾಧ್ಯವಾಗುತ್ತದೆ ಈ ಕಾರಣಕ್ಕಾಗಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಉತ್ತಮ ಗುಣಮಟ್ಟದ ವಸತಿ ಸಂಕೀರ್ಣವನ್ನು ನಿರ್ಮಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲಕೃಷ್ಣ ಹೆಗಡೆ, ಪ್ರಮುಖರಾದ ವಿಜಯ ಮಿರಾಶಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹಿಮವತಿ ಭಟ್ ,ವಲಯ ಅರಣ್ಯಾಧಿಕಾರಿ ಬಾಲ ಸುಬ್ರಮಣ್ಯ, ಆನಂದ ಎಚ್.ಎನ್, ಸತ್ಯ ನಾಯರ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

error: