ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ಸಂಸ್ಕಾರ ಶಿಕ್ಷಣ ಸೇವಾ ಪ್ರತಿಷ್ಠಾನ ಯಲ್ಲಾಪುರ ಇದರ ಆಶ್ರಯದಲ್ಲಿ ಮಕ್ಕಳಿಗಾಗಿ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆ ಹಾಗೂ ರಸಪ್ರಶ್ನೆ ಸ್ಪರ್ಧೆಯನ್ನು ಶಾರದಾಂಬ ದೇವಸ್ಥಾನ ನಾಯಕನಕೆರೆ ಯಲ್ಲಾಪುರದಲ್ಲಿ ಸಂಘಟಿಸಲಾಗಿತ್ತು.
ಶಾರದಾಂಬಾ ದೇವಸ್ಥಾನ ಹಾಗೂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಾಪುರ ತಾಲೂಕು ಮಟ್ಟದ ರಾಮಾಯಣ ಮತ್ತು ಮಹಾಭಾರತ ಪರೀಕ್ಷೆ ನಡೆಸಿ ಅದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು. ಜಾಗ್ರತ ಪಡೆಯ ಸಂಚಾಲಕ ನಾರಾಯಣ ಹೆಗಡೆ ಬೀಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತಿಥಿಗಳಾಗಿ ಶ್ರೀ ಶಾರದಾಂಬಾ ದೇವಸ್ಥಾನ ಹಾಗೂ ಪಾಠಶಾಲೆಯ ಕಾರ್ಯದರ್ಶಿ ನಾಗೇಂದ್ರ ಭಟ್ಟ ಕವಾಳೆ ಹಾಗೂ ಶಿವರಾಮ ಭಾಗ್ವತ ಅಧ್ಯಾಪಕರು ಶಾರದಾಂಬಾ ಪಾಠಶಾಲೆ ಯಲ್ಲಾಪುರ ಇವರು ಉಪಸ್ಥಿತರಿದ್ದರು. ಸಂಸ್ಕಾರ ಶಿಕ್ಷಣದ ಕೋಶಾಧ್ಯಕ್ಷ ಶಿಕ್ಷಕ ಸುಬ್ರಾಯ ಭಟ್ಟ ಹಾಗೂ ಕಾರ್ಯದರ್ಶಿ ಶಿಕ್ಷಕ ದಿವಾಕರ ಮರಾಠಿ ಕಾರ್ಯಕ್ರಮವನ್ನು ಸಂಘಟಿಸಿ ನಡೆಸಿಕೊಟ್ಟರು.150 ಮಕ್ಕಳು ಇದರಲ್ಲಿ ಭಾಗವಹಿಸಿದ್ದರು .
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ