ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ ಪಟ್ಟಣದ ವಿಶ್ವ ದರ್ಶನ ಶಿಕ್ಷಣ ಸಂಸ್ಥೆಯ ವಿಶ್ವ ದರ್ಶನ ಕೇಂದ್ರೀಯ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವವು ವಿಜೃಂಭಣೆಯಿAದ ಹಾಗೂ ಸಂಸ್ಕಾರಯುತವಾಗಿ ನಡೆಯಿತು.
ಶಾಲೆಯನ್ನು ತಳೀರು ತೋರಣಗಳಿಂದ ಅಲಂಕರಿಸಲಾಗಿತ್ತು 2022-23 ನೇ ಸಾಲಿನ ಶೈಕ್ಷಣಿಕ ವರ್ಷದ ಎಲ್ಲ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು ಪ್ರಾರ್ಥನೆಯ ವೇಳೆಯಲ್ಲಿ ಪ್ರಾಂಶುಪಾಲರಾದ ಗಣೇಶ ಭಟ್ ರವರು ಎಲ್ಲ ವಿದ್ಯಾರ್ಥಿಗಳಿಗೆ ಶುಭಕೋರಿದರು. ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರವರು ಮಾತನಾಡಿ ಯಲ್ಲಾಪುರದಲ್ಲಿ ಸಿ.ಬಿ.ಎಸ್.ಇ ಶಿಕ್ಷಣ ನೀಡುತ್ತಿರುವ ನಮ್ಮ ಸಂಸ್ಥೆಯಲ್ಲಿ ಅನೇಕ ಶೈಕ್ಷಣಿಕ ಅವಕಾಶಗಳನ್ನು ಸೃಷ್ಟಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಬಹುಮುಖ ಪ್ರತಿಭೆ ಅನಾವರಣ ಮಾಡಿಕೊಳ್ಳಲು ವ್ಯವಸ್ಥೆ ಸಿದ್ಧವಿದೆ. ಮಕ್ಕಳು ತಮ್ಮ ಪಾಲಕರಿಗೂ, ಶಿಕ್ಷಣ ಸಂಸ್ಥೆಗೂ, ನಾಡಿಗೂ ಹೆಮ್ಮೆ ತರುವಂತೆ ಅಧ್ಯಯನ ಮಾಡಬೇಕು . ಯಲ್ಲಾಪುರದಲ್ಲಿ ಮೊದಲ ಬಾರಿಗೆ ಸಿ.ಬಿ.ಎಸ್.ಇ ಪಠ್ಯಕ್ರಮ ಒದಗಿಸಿದ್ದು ಅತ್ಯಂತ ಸಂತೋಷವನ್ನು ನೀಡಿದೆ ಎನ್ನುತ್ತಾ ಸರ್ವರಿಗೂ ಶುಭಹಾರೈಸಿದರು. ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಈ ಸಂದರ್ಭದಲ್ಲಿ ಪಠ್ಯವನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಸೋಂದಾ ಏರ್ಪಡಿಸಿದ ಕೃಷಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕುಮಾರಿ ಸಿಂಚನ ಭಟ್ಳನ್ನು ಅಭಿನಂದಿಸಲಾಯಿತು. ಶಾಲಾ ಪ್ರಾರಂಭೋತ್ಸವ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ತರಗತಿಯ ವಿದ್ಯಾರ್ಥಿಗಳು, ಕೆಲವು ಪಾಲಕರು ಉಪಸ್ಥಿತರಿದ್ದರು. 2022/23 ನೇ ಸಾಲಿನ ಶೈಕ್ಷಣಿಕ ವರ್ಷವೂ ನಿರ್ವಿಘ್ನವಾಗಿ ನಡೆಯುವಂತೆ ದೇವರಲ್ಲಿ ಪ್ರಾರ್ಥಿಸಿ ಎಲ್ಲರಿಗೂ ಸಿಹಿ ವಿತರಿಸಲಾಯಿತು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ