May 14, 2024

Bhavana Tv

Its Your Channel

ಬಳಗಾರದಲ್ಲಿ ನಡೆದ ಬಿತ್ತೋತ್ಸವ ಕಾರ್ಯಕ್ರಮ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿಯವರು ಜೀವನ ವಿಕಾಸ ಟ್ರಸ್ಟ್ (ರಿ) ಯಲ್ಲಾಪುರ ಹಾಗೂ ಯಲ್ಲಾಪುರ ಅರಣ್ಯ ವಿಭಾಗ ಇವರ ಸಹಯೋಗದಲ್ಲಿ ತಾಲ್ಲೂಕಿನ ಬಳಗಾರದಲ್ಲಿ ನಡೆದ ಬಿತ್ತೋತ್ಸವ ಕಾರ್ಯಕ್ರಮದಲ್ಲಿ ಬೀಜಬಿತ್ತನೆ ಮಾಡುವುದರ ಮೂಲಕ ಯಶಸ್ವಿಗೊಳಿಸಿದರು . ಹಾಗೂ ಮಕ್ಕಳಿಗೆ ಪರಿಸರದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜೀವನ ವಿಕಾಸ ಟ್ರಸ್ಟ್ ನ ಉಪಾಧ್ಯಕ್ಷರಾದ ಶಂಕರ ಸಿದ್ದಿ ಬಳಗಾರ,ಗ್ರಾಮ ಪಂಚಾಯತ್ ಸದಸ್ಯರಾದ ವಿಶ್ವನಾಥ ಆರ್ ಹಳೆಮನೆ, ವಲಯ ಅರಣ್ಯಾಧಿಕಾರಿಯವರಾದ ಪ್ರಸಾದ್ ಪೆಡ್ನೇಕರ್ ಹಾಗೂ ಯುವಕ ಸಂಘದ ಅಧ್ಯಕ್ಷರಾದ ಗಿರೀಶ್ ಭಟ್ ಜೀವನ ವಿಕಾಸ ಟ್ರಸ್ಟ್ ನ ವಿಶ್ವಸ್ಥರಾದ ಪರಶುರಾಮ ಸಿದ್ದಿ, ಅರಣ್ಯ ಇಲಾಖೆ ಸಿಬ್ಬಂದಿಗಳು , ಬಳಗಾರ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಅನಂತ ಭಟ್ ಕರಾಳಮನೆ, ಪ್ರಮುಖರಾದ ಬಾಬು ಸಿದ್ದಿ, ರಾಮಾ ಸಿದ್ದಿ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

error: