ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ೧೮ ರಿಂದ ೫೯ ವರ್ಷದೊಳಗಿನವರಿಗೆ ಕೋವಿಡ್ – ೧೯ ಬೂಸ್ಟರ್ ಡೋಸ್ ಲಸಿಕಾಕರಣ ” ಕೋವಿಡ್ ಲಸಿಕೆ ಅಮೃತ ಮಹೋತ್ಸವಕ್ಕೆ ” ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಚಿವರು, ಜುಲೈ ೧೫ರಿಂದ ೭೫ ದಿನಗಳ ಕಾಲ ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳುತ್ತಿದ್ದು ೧೮ ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಕೋವಿಡ್ ಲಸಿಕೆಯನ್ನು ಪಡೆಯುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕಾ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ, ಪಟ್ಟಣ ಪಂಚಾಯತ ಸದಸ್ಯರಾದ ಅಮಿತ ಅಂಗಡಿ, ವೈದ್ಯಕೀಯ ಸಿಬ್ಬಂದಿಗಳು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು
.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ