May 4, 2024

Bhavana Tv

Its Your Channel

18 ರಿಂದ 59 ವರ್ಷದೊಳಗಿನ ಕೋವಿಡ್ -19 ಬೂಸ್ಟರ್ ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ೧೮ ರಿಂದ ೫೯ ವರ್ಷದೊಳಗಿನವರಿಗೆ ಕೋವಿಡ್ – ೧೯ ಬೂಸ್ಟರ್ ಡೋಸ್ ಲಸಿಕಾಕರಣ ” ಕೋವಿಡ್ ಲಸಿಕೆ ಅಮೃತ ಮಹೋತ್ಸವಕ್ಕೆ ” ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, ಜುಲೈ ೧೫ರಿಂದ ೭೫ ದಿನಗಳ ಕಾಲ ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳುತ್ತಿದ್ದು ೧೮ ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಕೋವಿಡ್ ಲಸಿಕೆಯನ್ನು ಪಡೆಯುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕಾ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ, ಪಟ್ಟಣ ಪಂಚಾಯತ ಸದಸ್ಯರಾದ ಅಮಿತ ಅಂಗಡಿ, ವೈದ್ಯಕೀಯ ಸಿಬ್ಬಂದಿಗಳು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

.

error: