May 1, 2024

Bhavana Tv

Its Your Channel

ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ತರಗತಿಯ ಉದ್ಘಾಟನೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ: ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ತರಗತಿಯ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿಯಾದ ಕುಮಾರ ನಿಕ್ಷಿತ್ ಗಾಂವ್ಕರನ ಶಾರದಾ ಸ್ತುತಿಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
ಶಾಲೆಯ ಪ್ರಾಂಶುಪಾಲರಾದ ಮಹಾದೇವಿ ಭಟ್ಟ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ನುಡಿಯಲ್ಲಿ ಮಕ್ಕಳಿಗೆ ಸಂಗೀತದ ಮಹತ್ವದ ಬಗ್ಗೆ ತಿಳಿ ಹೇಳಿ ಕಲಿಕೆ ನಿರಂತರವಾಗಿ ಸಾಗಲಿ, ಅನೇಕ ವರ್ಷಗಳ ಕಾಲ ಸಂಗೀತ ಅಭ್ಯಾಸವನ್ನು ಮಾಡಿ ಎಷ್ಟೋ ಮಕ್ಕಳನ್ನು ಸಂಗೀತದಲ್ಲಿ ತರಬೇತುಗೊಳಿಸಿ ಸಂಗೀತ ಕ್ಷೇತ್ರಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿರುವ ಗುರುಗಳಾದ ಪುಷ್ಪ ವಿ ಭಟ್ಟ ಇವರು ನಿಮಗೆ ಸಿಕ್ಕಿರುವುದು ನಿಮ್ಮ ಪುಣ್ಯ, ಈ ಸಂಗೀತವನ್ನು ಬೆಳೆಸಿ ಉಳಿಸಿ ಎಂದು ಮಹಾದೇವಿ ಭಟ್ಟ ಹೇಳಿದರು . ಕಲಾವತಿ ಗೌಡ ಸ್ವಾಗತಿಸಿ , ಕಾರ್ಯಕ್ರಮವನ್ನು ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಪಾಲಕರು , ಸಂಗೀತ ವಿದ್ಯಾರ್ಥಿಗಳು , ಶಾಲಾ ಶಿಕ್ಷಕ ವೃಂದ , ಹಾಗೂ ಸಂಸ್ಥೆಯ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಸಂಗೀತ ಶಿಕ್ಷಕಿಯಾದ ಪುಷ್ಪಾ ಭಟ ಶಾರದಾ ಸ್ತುತಿಯೊಂದಿಗೆ ತರಗತಿಯನ್ನು ಪ್ರಾರಂಭಿಸಿದರು. ಪ್ರತಿ ವಾರ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ ತರಗತಿ ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ನಡೆಯುವುದಾಗಿ ತಿಳಿಸಿದರು.

error: