May 6, 2024

Bhavana Tv

Its Your Channel

ಯಲ್ಲಾಪುರ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ” ಜನ ಜಾಗೃತಿ ಜಾಥಕ್ಕೆ ” ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಚಾಲನೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಯಂತೆ ” ಹರ್ ಘರ್ ತಿರಂಗಾ ” ಅಭಿಯಾನದ ಅಂಗವಾಗಿ ಯಲ್ಲಾಪುರ ಬಿಜೆಪಿ ಮಂಡಲದ ವತಿಯಿಂದ ಆಯೋಜಿಸಿದ್ದ ” ಜನ ಜಾಗೃತಿ ಜಾಥಕ್ಕೆ ” ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರು ಚಾಲನೆ ನೀಡಿದರು.
ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರಿಸಿ ” ಹರ ಘರ್ ತಿರಂಗಾ ” ಅಭಿಯಾನದ ಬಗ್ಗೆ ಜಾಗೃತಿ ಮೂಡಿಸಿದ ಸಚಿವರು ಪಟ್ಟಣದ ಆಟೋ ರಿಕ್ಷಾ ಚಾಲಕರಿಗೆ ರಾಷ್ಟ್ರ ಧ್ವಜವನ್ನು ವಿತರಿಸಿ ಮಾತನಾಡಿದ ಸಚಿವರು ಭಾರತಮಾತೆಯನ್ನು ಆಂಗ್ಲರ್ ಮುಷ್ಟಿಯಿಂದ ಬಿಡುಗಡೆಗೊಳಿಸುವುದಕ್ಕೆ ತ್ಯಾಗ ಬಲಿದಾನವನ್ನು ಗೈದ ಮಹಾನ ನಾಯಕರ ಇತಿಹಾಸವನ್ನು ಪ್ರತಿ ಮನೆ ಮನೆಗಳಿಗೂ ತಿಳಿಸುವ ನಿಟ್ಟಿನಲ್ಲಿ ” ಹರ ಘರ್ ತಿರಂಗಾ ” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಪ್ರತಿಯೊಬ್ಬರು ತಮ್ಮ ಮನೆಯ ರಾಷ್ಟ್ರ ಧ್ವಜವನ್ನು ಹಾರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಕರೆಯನ್ನು ಯಶಸ್ವಿಗೊಳಿಸೋಣ ಎಂದರು.
ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಎನ್.ಗಾಂವ್ಕರ್, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ, ಪ್ರಸಾದ ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಪ್ರಮುಖರಾದ ಉಮೇಶ ಭಾಗ್ವತ, ಶಿರಿಷ್ ಪ್ರಭು, ಸತೀಶ ಪಾಟಣಕರ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್,, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

error: