May 3, 2024

Bhavana Tv

Its Your Channel

ಪೋಷಣ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯಕ್ರಮದ ಜನ ಜಾಗೃತಿಯ ಪೋಷಣ ರಥಕ್ಕೆ ಚಾಲನೆ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕಾ ಪಂಚಾಯತ ಯಲ್ಲಾಪುರ ಸಹಯೋಗದಲ್ಲಿ ಹಮ್ಮಿಕೊಂಡ ” ಪೋಷಣ ಮಾಸಾಚರಣೆ ಹಾಗೂ ಮಾತೃವಂದನಾ ಸಪ್ತಾಹ ಕಾರ್ಯಕ್ರಮ “ದ ಜನ ಜಾಗೃತಿಯ ” ಪೋಷಣ ರಥ ” ಕ್ಕೆ ಹಸಿರು ನಿಶಾನೆ ತೋರುವ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ,ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ತಾಲೂಕಾ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಜಗದೀಶ ಕಮ್ಮಾರ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

error: