ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ವೈ.ಟಿ.ಎಸ್.ಎಸ್. ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರದ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಯಲ್ಲಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿಯಾದ ರಾಮಕೃಷ್ಣ ಗೌಡ ಮಾತನಾಡಿ ವಿದ್ಯಾರ್ಥಿಗಳು ಯಶಸ್ಸಿಗಾಗಿ ಸತತ ಪ್ರಯತ್ನ ಮಾಡಬೇಕು ಎಂದರು.
ಮುಖ್ಯ ಅತಿಥಿಯಾದ ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ವೇಣುಗೋಪಾಲ ಮದ್ಗುಣಿಯವರು ತಮ್ಮ ಜೀವನವನ್ನು ನೆನಪಿಸಿಕೊಂಡು ಜೀವನದ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು. 27-10-2022 ರಿಂದ 2-11-2022ರ ವರೆಗೆ ರವೀಂದ್ರ ನಗರದಲ್ಲಿ ನಡೆದ ಶಿಬಿರದಲ್ಲಿ ಪ್ರತಿದಿನ ಬೆಳಗ್ಗೆ 6:30ಕ್ಕೆ ವಿದ್ಯಾರ್ಥಿಗಳಿಗೆ ವ್ಯಾಯಾಮ ತರಬೇತಿ ನೀಡುತ್ತಿದ್ದ ಮಾಜಿ ಯೋಧ ಶಾಂತಾರಾಮ ನಾಯ್ಕ ರವರು ಮಾತನಾಡಿ ದೈಹಿಕ ಪರಿಶ್ರಮದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ಶಿಬಿರಾರ್ಥಿಗಳಿಗೆ ಗಣ್ಯರು ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಪ್ರಾಂಶುಪಾಲರಾದ ವಾಣಿಶ್ರೀ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಸ್ನೇಹಾ ಸಂಗಡಿಗರು ಪ್ರಾರ್ಥಿಸಿದರು. ಉಪನ್ಯಾಸಕ ಆನಂದ ಹೆಗಡೆ ಸ್ವಾಗತಿಸಿದರು. ಉಪನ್ಯಾಸಕ ಮನೋಹರ ಶಾನಭಾಗ್ ನಿರೂಪಿಸಿದರು. ಎನ್.ಎಸ್. ಎಸ್. ಕಾರ್ಯಕ್ರಮಾಧಿಕಾರಿ ರೇಷ್ಮಾಶೇಖ್ ವಂದಿಸಿದರು
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ