April 26, 2024

Bhavana Tv

Its Your Channel

ಯಲ್ಲಾಪುರದ ಜೀವನ ವಿಕಾಸ ಟ್ರಸ್ಟ್ (ರಿ) ಇದರ ವತಿಯಿಂದ ಸಿದ್ದಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಯಲ್ಲಾಪುರದ ಜೀವನ ವಿಕಾಸ ಟ್ರಸ್ಟ್ (ರಿ) ಇದರ ವತಿಯಿಂದ ತಾಲೂಕಿನ ಬೀಸಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸಿದ್ದಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಜೀವನ ವಿಕಾಸ ಟ್ರಸ್ಟ್ ನ ನಿರ್ವಾಹಕ ವಿಶ್ವಸ್ಥರು, ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿಯವರು ನೆರವೇರಿಸಿದರು.
ನಂತರ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಮಕ್ಕಳು ಅನೇಕ ಸೌಲಭ್ಯಗಳಿಂದ ವಂಚಿತರಾಗಿ ಉಳಿಯುತ್ತಾರೆ.ಆದರೆ ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕವಾಗಿ ಸಮಸ್ಯೆಗಳನ್ನು ಎದುರಿಸಿ ಮುಂದೆ ಬರುವುದು ಅನಿವಾರ್ಯವಾಗಿದೆಯೆಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದಂತಹ ಆರುಮೊಗಮ ಹಾಗೂ ಜೀವನ ವಿಕಾಸ ಟ್ರಸ್ಟ್ ನ ಉಪಾಧ್ಯಕ್ಷರಾದ ಶಂಕರ ಸಿದ್ದಿ, ಕಾರ್ಯದರ್ಶಿಗಳಾದ ಸುರೇಶ ಸಿದ್ದಿ ಟ್ರಸ್ಟಿಗಳಾದ ಮಂಜುನಾಥ ಸಿದ್ದಿ, ಪರಶುರಾಮ ಸಿದ್ದಿ ಸ್ಥಳೀಯ ಪ್ರಮುಖರಾದ ಗಣಪತಿ ಸಿದ್ದಿ ಹಾಗೂ ಶಾಲೆಯ ಶಿಕ್ಷಕರು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.

error: