ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಯಲ್ಲಾಪುರದ ಜೀವನ ವಿಕಾಸ ಟ್ರಸ್ಟ್ (ರಿ) ಇದರ ವತಿಯಿಂದ ತಾಲೂಕಿನ ಬೀಸಗೋಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಸಿದ್ದಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮವನ್ನು ಜೀವನ ವಿಕಾಸ ಟ್ರಸ್ಟ್ ನ ನಿರ್ವಾಹಕ ವಿಶ್ವಸ್ಥರು, ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ ಸಿದ್ದಿಯವರು ನೆರವೇರಿಸಿದರು.
ನಂತರ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಮಕ್ಕಳು ಅನೇಕ ಸೌಲಭ್ಯಗಳಿಂದ ವಂಚಿತರಾಗಿ ಉಳಿಯುತ್ತಾರೆ.ಆದರೆ ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕವಾಗಿ ಸಮಸ್ಯೆಗಳನ್ನು ಎದುರಿಸಿ ಮುಂದೆ ಬರುವುದು ಅನಿವಾರ್ಯವಾಗಿದೆಯೆಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದಂತಹ ಆರುಮೊಗಮ ಹಾಗೂ ಜೀವನ ವಿಕಾಸ ಟ್ರಸ್ಟ್ ನ ಉಪಾಧ್ಯಕ್ಷರಾದ ಶಂಕರ ಸಿದ್ದಿ, ಕಾರ್ಯದರ್ಶಿಗಳಾದ ಸುರೇಶ ಸಿದ್ದಿ ಟ್ರಸ್ಟಿಗಳಾದ ಮಂಜುನಾಥ ಸಿದ್ದಿ, ಪರಶುರಾಮ ಸಿದ್ದಿ ಸ್ಥಳೀಯ ಪ್ರಮುಖರಾದ ಗಣಪತಿ ಸಿದ್ದಿ ಹಾಗೂ ಶಾಲೆಯ ಶಿಕ್ಷಕರು ಹಾಗೂ ಮುದ್ದು ಮಕ್ಕಳು ಉಪಸ್ಥಿತರಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ