May 18, 2024

Bhavana Tv

Its Your Channel

ಸಿ.ಎಸ್.ಆರ್. ಅನುದಾನದ ಅಡಿಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 32 ಲಕ್ಷ ರೂಪಾಯಿ ವೆಚ್ಚದಲ್ಲಿ ತರಗತಿ ಕೊಠಡಿ ನಿರ್ಮಾಣ

ವರದಿ: ವೇಣುಗೋಪಾಲ ಮದ್ಗುಣಿ

ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರವರ ಮನವಿಯ ಮೇರೆಗೆ ಟೊಯೋಟಾ ಕಿರ್ಲೋಸ್ಕರ್ ಕಂಪನಿಯು ತಮ್ಮ ಸಿ.ಎಸ್.ಆರ್. ಅನುದಾನದ ಅಡಿಯಲ್ಲಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 32 ಲಕ್ಷ ರೂಪಾಯಿ ವೆಚ್ಚದಲ್ಲಿ ತರಗತಿ ಕೊಠಡಿಯನ್ನು ನಿರ್ಮಾಣ ಮಾಡಿದ್ದು.
ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ನೂತನವಾಗಿ ನಿರ್ಮಾಣವಾದ ತರಗತಿ ಕೊಠಡಿಯನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ಪ್ರತಿನಿಧಿಗಳಿಗೆ ಸಚಿವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ, ಯುವ ನಾಯಕರಾದ ವಿವೇಕ ಹೆಬ್ಬಾರ, ಟೊಯೋಟಾ ಕಿರ್ಲೋಸ್ಕರ್ ಕಂಪನಿಯ ಪ್ರತಿನಿಧಿಗಳಾದ ಆರ್.ರೋಶನ್, ಕಿರಣ ಎಚ್.ಜೆ, ಎಸ್.ಪ್ರಶಾಂತ, ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ, ಪ್ರಮುಖರಾದ ವಿಜಯ ಮಿರಾಶಿ, ರಾಮು ನಾಯ್ಕ ಸೇರಿದಂತೆ ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ, ಉಪಾಧ್ಯಕ್ಷರಾದ ಶ್ಯಾಮಿಲಿ ಪಾಟಣಕರ, ಸದಸ್ಯರು, ಸಾರ್ವಜನಿಕರು, ಉಪಸ್ಥಿತರಿದ್ದರು.

error: