ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ: ತಾಲೂಕಿನ ಹಿತ್ಲಳ್ಳಿ ಬಳಿ ಕಾರು ಅಪಘಾತದಲ್ಲಿ ಹಿರಿಯ ಯಕ್ಷಗಾನ ಭಾಗವತ ತಿಮ್ಮಪ್ಪ ಭಾಗ್ವತ ಬಾಳೆಹದ್ದ (59) ನಿಧನರಾಗಿದ್ದಾರೆ.
ಹಿತ್ಲಳ್ಳಿ ಬಳಿ ಮಂಗಳವಾರ ರಾತ್ರಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡು, ಮೃತಪಟ್ಟಿದ್ದಾರೆ. ಅವರಿಗೆ ಪುತ್ರ, ಪುತ್ರಿ ಹಾಗೂ ಬಂಧು ಬಳಗವಿದೆ.
ಪ್ರಸಿದ್ಧ ಭಾಗವತರಾಗಿದ್ದ ತಂದೆ ಕೃಷ್ಣ ಭಾಗ್ವತ ಅವರಲ್ಲಿ ಯಕ್ಷಗಾನ ಭಾಗವತಿಕೆ ಹಾಗೂ ಶ್ರೀಪಾದ ಹೆಗಡೆ ಕಂಪ್ಲಿ ಅವರಲ್ಲಿ ಸಂಗೀತ ಅಭ್ಯಾಸ ಮಾಡಿದ್ದರು. ಕಳೆದ ಮೂರುವರೆ ದಶಕಗಳಿಂದ ಯಕ್ಷಗಾನ ಭಾಗವತರಾಗಿ, ಯಕ್ಷ ಗುರುವಾಗಿ, ಹಿಂದುಸ್ಥಾನಿ ಗಾಯಕರಾಗಿ, ಹಾರ್ಮೊನಿಯಂ ವಾದಕರಾಗಿ, ಸಂಗೀತ ಸಂಯೋಜಕರಾಗಿ ಯಕ್ಷಗಾನ ಹಾಗೂ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಯಲ್ಲಾಪುರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ಕನೇಯ ಸಮ್ಮೇಳನದಲ್ಲಿ ಅವರನ್ನು ಗೌರವಿಸಿ ಸನ್ಮಾನಿಸಲಾಗಿತ್ತು.ರಂಗಾಯಣ ತಂಡದಲ್ಲಿ ಖೈದಿಗಳಿಗೆ ನಾಟಕ ಕಲಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ