May 19, 2024

Bhavana Tv

Its Your Channel

ಜ. 7 ರಂದು ನಂದೊಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ರಜತ ಮಹೋತ್ಸವ

ಯಲ್ಲಾಪುರ ತಾಲೂಕಿನ ನಂದೊಳ್ಳಿ ಹಾಲು ಉತ್ಪಾದಕರ ಸಹಕಾರಿ ಸಂಘದ ರಜತ ಮಹೋತ್ಸವ ಜನೇವರಿ 7 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಉತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ತಿಮ್ಮಣ್ಣ.ಕೆ. ಭಾಗ್ವತ ಹೇಳಿದರು.
ಅವರು ಸಂಘದ ಆವಾರದಲ್ಲಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಜನೇವರಿ 7 ರಂದು ಬೆಳಿಗ್ಗೆ 10.30 ಕ್ಕೆ ಸಚಿವ ಶಿವರಾಮ ಹೆಬ್ಬಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಶಂಕರ ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ. ಜನಪ್ರತಿನಿಧಿಗಳು, ಹಾಲು ಒಕ್ಕೂಟಗಳ ಪ್ರಮುಖರು, ಸ್ಥಳೀಯ ಮುಖಂಡರು ಭಾಗವಹಿಸುವರು ಎಂದು ವಿವರಿಸಿದರು.
ಸಂಘದ ಉಪಾಧ್ಯಕ್ಷ ಜನಾರ್ದನ ಬೆಳ್ಳಿ ಮಾತನಾಡಿ, ಕಾರ್ಯಕ್ರಮದಲ್ಲಿ ಸಂಘದ ಸಂಸ್ಥಾಪಕ ಟಿ.ಕೆ.ಭಾಗ್ವತ ಅವರನ್ನು ಸನ್ಮಾನಿಸಲಾಗುವುದು. ಮಧ್ಯಾಹ್ನ 3 ರಿಂದ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಬೆಳವಣಿಗೆ ಹಾಗೂ ವಿವಿಧ ವಿಷಯಗಳ ಕುರಿತು ಗೋಷ್ಠಿ ನಡೆಯಲಿದೆ. ಸಂಜೆ 5 ಕ್ಕೆ ಸಮಾರೋಪ, ನಂತರ ಪ್ರಸಿದ್ಧ ಕಲಾವಿದರಿಂದ ಬೇಡರ ಕಣ್ಣಪ್ಪ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದರು.
ಸಂಘದ ನಿರ್ದೇಶಕರಾದ ಶ್ರೀಕೃಷ್ಣ ಭಟ್ಟ ತಟ್ಟಿಗದ್ದೆ, ಕೆ.ಜಿ.ಭಟ್ಟ, ನಾಗೇಶ ಹೆಗಡೆ, ಮುಖ್ಯ ಕಾರ್ಯನಿರ್ವಾಹಕ ತಿಮ್ಮಣ್ಣ ಭಟ್ಟ ಇತರರಿದ್ದರು.

ವರದಿ: ವೇಣುಗೋಪಾಲ ಮದ್ಗುಣಿ

error: