ವರದಿ: ವೇಣುಗೋಪಾಲ ಮದ್ಗುಣಿ
ಯಲ್ಲಾಪುರ : ಫೆಬ್ರುವರಿ 4 ರಂದು ಯಲ್ಲಾಪುರ ತಾಲೂಕಿನ ಆನಗೋಡಿನಲ್ಲಿ ತಾಲೂಕಿನ 5 ನೇ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದರ ಸರ್ವಾಧ್ಯಕ್ಷರಾಗಿ ಹಿರಿಯ ನಾಟಕಕಾರ, ಕವಿ ಟಿ.ವಿ.ಕೋಮಾರ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಇತ್ತೀಚೆಗೆ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಕೋಮಾರ ಅವರು ಕಳೆದ 4 ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ನಾಟಕಕಾರರಾಗಿ ಹೆಸರು ಮಾಡಿದ್ದಾರೆ. ಕೃಷಿಕರಾಗಿರುವ ಕೋಮಾರ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿಯೂ ನಿರತರಾಗಿದ್ದಾರೆ. ಸೇಡಿನ ದುರಂತ, ವಿಷ ಸರ್ಪದ ಸಂಚು, ಶೀಲವತಿ, ಸಿಡಿದೆದ್ದ ಹೆಣ್ಣು ಸೇರಿದಂತೆ ಸುಮಾರು 20 ರಷ್ಟು ಕೃತಿಗಳನ್ನು ಪ್ರಕಟಿಸಿದ್ದಾರೆ. ಜಿಲ್ಲೆ, ಹೊರಜಿಲ್ಲೆಗಳಲ್ಲಿ ಇವರ ನಾಟಕಗಳು ಸಾವಿರಾರು ಪ್ರದರ್ಶನ ಕಂಡಿವೆ. ಇನ್ನೂ 4 ಕೃತಿಗಳು ಬಿಡುಗಡೆಗೆ ಸಿದ್ಧಗೊಂಡಿವೆ.ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ತಾಲೂಕಿನ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರ ಸಹಕಾರ ನೀಡಬೇಕೆಂದು ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುಬ್ರಹ್ಮಣ್ಯ ಭಟ್ಟ ತಿಳಿಸಿದ್ದಾರೆ.
More Stories
ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್
ಯಲ್ಲಾಪುರ ನಗರದಲ್ಲಿ 11.12.23ದಂದು ಬೈಪಾಸ್ ನಿರ್ಮಾಣ ಮಾಡಲು ಮೆರವಣಿಗೆ, ಸಭೆ ನಡೆಸಲು ನಿರ್ದಾರ.
ಸಹಾಯಕ ಇಂಜಿನಿಯರ್ ಮಂಜುಳಾ ರವರಿಗೆ ಬಿಳ್ಕೋಡುಗೆ