ವಿಜಯಪೂರ: ಖಾಸಗಿ ಶಾಲೆಗಳ ಡೊನೇಷನ್ ಹಾವಳಿಗೆ ಕಡಿವಾಣ ಹಾಕಲು ಆಗ್ರಹಿಸಿ ನಮ್ಮ ಕರವೇ ಜಿಲ್ಲಾಧ್ಯಕ್ಷ ಶಕ್ತಿಕುಮಾರ ಉಕುಮನಾಳ ಅವರು ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಮಕ್ಕಳೊಂದಿಗೆ ಶಾಲೆ ಸಮವಸ್ತ್ರ ಧರಿಸಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅವರು, ಮಾರ್ಗದುದ್ದಕ್ಕೂ ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಡಳಿತ ಮತ್ತು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಖಾಸಗಿ ಶಾಲೆಗಳಲ್ಲಿ ಶಾಲೆ ಶುಲ್ಕ ನೆಪದಲ್ಲಿ ಡೊನೇಷನ್ ತೆಗೆದುಕೊಳ್ಳುತ್ತಿದ್ದು,ಬಡವರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಕಲಿಸಬೇಕಾದರೆ ಲಕ್ಷಗಟ್ಟಲೆ ಹಣ ತುಂಬಬೇಕಾದ ಸ್ಥಿತಿ ಬಂದಿದೆ. ಖಾಸಗಿ ಶಾಲೆಗಳು ದುಡ್ಡು ಮಾಡುವ ದಂಧೆಗಳಿಗಿದಿವೆ. ಸರ್ಕಾರದ ಆದೇಶ ಗಾಳಿಗೆ ತೂರಿ ಬೇಕಾಬಿಟ್ಟಿ ಹಣ ವಸೂಲಿ ಮಾಡುತ್ತಿವೆ. ಅಲ್ಲದೆ, ಕನ್ನಡ ಮಾಧ್ಯಮವನ್ನು ಬದಿಗೊತ್ತಿ ಇಂಗ್ಲಿಷ್ ಮಾಧ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಇದರಿಂದ ಕನ್ನಡ ಮಾಧ್ಯಮ ಶಾಲೆಗಳಿಗೂ ಹೊಡೆತ ಬೀಳುತ್ತಿದೆ. ಸರ್ಕಾರ ಕೂಡಲೇ ಖಾಸಗಿ ಶಾಲೆಗಳಿಗೆ ಮೂಗುದಾರ ಹಾಕಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪರಶುರಾಮ ವಿಜಯಪುರ, ವಿರೇಶ ತಂಬಾಕೆ, ವಿರೇಶ ನಾಟೀಕಾರ, ಸುಜಾತಾ ಸಿಂಧೆ, ಮಹಾಜನ ಕಲಾದಗಿ, ಅನಸುಯಾ ಚವ್ಹಾಣ್, ಮಕ್ಕಳಾದ ಸಾಗರ, ಸೃಷ್ಟಿ ಇತರರು ಉಪಸ್ಥಿತರಿದ್ದರು.
ವರದಿ ಬಿ ಎಸ್ ಹೊಸೂರ.
More Stories
ತಾಳಿಕೋಟೆಯಲ್ಲಿ ನಡೆದ ಶ್ರೀ ಸಾಯಿ ಪರಿಕ್ರಮ್ ಮಹೋತ್ಸವ
ಅದ್ದೂರಿಯಾಗಿ ನಡೆದ ಶ್ರೀ ಯಲಗೂರೇಶ್ವರ ಕಾರ್ತಿಕೋತ್ಸವ
ತಾಳಿಕೋಟೆಯಲ್ಲಿ ಅಂಗಾರಕ ಸಂಕಷ್ಟಿ ಚತುರ್ಥಿ ಆಚರಣೆ