ವರದಿ ಬಿ ಎಸ್ ಹೊಸೂರ.
ವಿಜಯಪೂರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರ ಬಣ)ದ ವತಿಯಿಂದ ಇಂಡಿ ಮತ್ತು ಸಿಂದಗಿ ವಿಭಾಗಿಯ ಸಂಚಾಲಕರ ಆಯ್ಕೆ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲೆಯ ಇಂಡಿ ನಗರದ ಪ್ರವಾಸಿ ಮಂದಿರದಲ್ಲಿ ನಡೆಯಿತು.
ರಾಜ್ಯ ಸಂಚಾಲಕ ಡಿ.ಜಿ.ಸಾಗರರವರ ಆದೇಶದ ಮೇರೆಗೆ ಇಂಡಿ ಮತ್ತು ಸಿಂದಗಿ ವಿಭಾಗಿಯ ಸಂಚಾಲಕರನ್ನಾಗಿ ನಾಗೇಶ ತಳಕೇರಿ ಮತ್ತು ಅಲ್ಪ ಸಂಖ್ಯಾತರ ಘಟಕದಿಂದ ಸದ್ದಾಂ ಅರಬ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಎಂದು ಜಿಲ್ಲಾ ಸಂಚಾಲಕರಾದ ವಿನಾಯಕ ಗುಣಸಾಗರ ರವರು ಘೋಷಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕ ರಮೇಶ ಆಸಂಗಿ, ಜಿಲ್ಲಾ ಸಂಘಟನೆ ಪದಾಧಿಕಾರಿಗಳಾದ ವೈ.ಸಿ. ಮಯೂರ, ಅಶೋಕ ಚಲವಾದಿ, ಸಿದ್ದು ರಾಯಣ್ಣ ಸೇರಿದಂತೆ ವಿವಿಧ ಪದಾಧಿಕಾರಿಗಳು ಭಾಗಿಯಾಗಿದ್ದರು.
More Stories
ತಾಳಿಕೋಟೆಯಲ್ಲಿ ನಡೆದ ಶ್ರೀ ಸಾಯಿ ಪರಿಕ್ರಮ್ ಮಹೋತ್ಸವ
ಅದ್ದೂರಿಯಾಗಿ ನಡೆದ ಶ್ರೀ ಯಲಗೂರೇಶ್ವರ ಕಾರ್ತಿಕೋತ್ಸವ
ತಾಳಿಕೋಟೆಯಲ್ಲಿ ಅಂಗಾರಕ ಸಂಕಷ್ಟಿ ಚತುರ್ಥಿ ಆಚರಣೆ